
ಹಿರಿಯೂರು:
ತಾಲ್ಲೂಕಿನ ಖಂಡೇನಹಳ್ಳಿ ಗ್ರಾಮದ ಡಿ.ಎಂ.ಯೋಗೇಶ್ ರವರು ಭಾರತೀಯ ಸೈನ್ಯದಲ್ಲಿ ಸುಭೆದಾರ್ ರಾಗಿ ಆಯ್ಕೆಯಾಗಿ ಮುಂಬಡ್ತಿ ಪಡೆದು ಚಿತ್ರದುರ್ಗ ಜಿಲ್ಲೆಗೆ ಹೆಸರು ತಂದಿದ್ದಾರೆ, ಭಾರತೀಯ ಸೈನ್ಯದಲ್ಲಿ ಚಿತ್ರದುರ್ಗ ಜಿಲ್ಲೆಯನ್ನು ಗುರುತಿಸುವಂತೆ ಮಾಡಿದ್ದಾರೆ. ಇವರ ಸಾಧನೆಯನ್ನು ಕಂಡು ಖಂಡೇನಹಳ್ಳಿಯ ಸಮಸ್ತ ಗ್ರಾಮಸ್ಥರು, ಸ್ನೇಹಿತರು,ಹಿತೈಷಿಗಳು ಹಾಗೂ ಕುಟುಂಬದವರು ಹರ್ಷ ವ್ಯಕ್ತಪಡಿಸಿದ್ದಾರೆ.
ಭಾರತೀಯ ಸೈನ್ಯದಲ್ಲಿ ಸುಭೆದಾರ್ ರಾಗಿ ಆಯ್ಕೆಯಾಗಿ ಮುಂಬಡ್ತಿ ಪಡೆದಿರುವ ಖಂಡೇನಹಳ್ಳಿ ಗ್ರಾಮದ ಡಿ.ಎಂ.ಯೋಗೇಶ್ ರವರಿಗೆ “ಹಿರಿಯೂರುನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪ ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ, ಇವರುಗಳು ಶುಭಹಾರೈಸಿದ್ದಾರೆ.

