
ಹಿರಿಯೂರು :
ಭೋವಿ ಸಮುದಾಯದ ನ್ಯಾಯಸಮ್ಮತ ಬೇಡಿಕೆಗಳನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯರವರ ಗಮನಕ್ಕೆ ತರುವ ಮೂಲಕ ಪರಿಹಾರ ನೀಡುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂಬುದಾಗಿ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಭರವಸೆ ನೀಡಲಾಗಿದೆ.

ಭೋವಿ ಸಮುದಾಯದ ಮೀಸಲಾತಿ ವಿಷಯದಲ್ಲಿ ನಡೆದ “ಬೆಳಗಾವಿ ಚಲೋ” ಪ್ರತಿಭಟನೆ ಸ್ಥಳಕ್ಕೆ ತೆರಳಿ, ಸರ್ಕಾರದ ಪರವಾಗಿ ಮನವಿಯನ್ನು ಸ್ವೀಕರಿಸಿ, ಮಾತನಾಡಿದರು. ಈ ಸಂದರ್ಭದಲ್ಲಿ ಭೋವಿ ಸಮಾಜದ ಮುಖಂಡರುಗಳು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.

