March 2, 2026
000002

ಹಿರಿಯೂರು:

ನಗರದ ನಗರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ “ಮನೆಯಲ್ಲೇ ಕುಳಿತು ಇ-ಖಾತಾವನ್ನು ಪಡೆದುಕೊಳ್ಳಿ ಎಂಬ ಕಾರ್ಯಕ್ರಮವು ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾಗಿದ್ದು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹೇಳಿದರು.

ನಗರದ ನಗರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ಶನಿವಾರದಂದು ಹಮ್ಮಿಕೊಳ್ಳಲಾಗಿದ್ದ “ಮನೆಯಲ್ಲೇ ಕುಳಿತು ಇ-ಖಾತಾವನ್ನು ಪಡೆದುಕೊಳ್ಳಿ” ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಡ್ರಾಪ್ಟ ಇ-ಆಸ್ತಿಪತ್ರಗಳನ್ನು ವಿತರಿಸಿ, ನಂತರ ಅವರು ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ  ನಗರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾದ ಖಾದಿರಮೇಶ, ಪೌರಾಯುಕ್ತ ಎ.ವಾಸೀಂ,  ಮಾಜಿ ನಗರಸಭಾ ಸದಸ್ಯರುಗಳು , ಕಂದಾಯ ಅಧಿಕಾರಿ ಜಬೀವುಲ್ಲಾ, ಕಂದಾಯ ನೀರಿಕ್ಷಕರುಗಳಾದ ವಿಜಯ ಕುಮಾರ್, ಜುನೇದ್ ಸಿರಾಜ್, ಕಂದಾಯ ಸಿಬ್ಬಂದಿಗಳಾದ ಸುರೇಶ, ವಿನಯ್, ಮಲ್ಲಿಕಾರ್ಜುನ, ಮಹಾಂತೇಶ್, ಶ್ರೀನಿವಾಸ್, ಪಾಂಡುರಂಗಪ್ಪ ಹಾಗೂ ಪೌರ ನೌಕರರ ಸಂಘದ ಅಧ್ಯಕ್ಷರ ಹನುಮಂತರಾಜ್, ಪ್ರಧಾನ ಕಾರ್ಯದರ್ಶಿ ಕೆ.ರಮೇಶ್ ಮತ್ತು ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು

About The Author

Leave a Reply

Your email address will not be published. Required fields are marked *