
ಹಿರಿಯೂರು :
ಹಿರಿಯೂರು ತಾಲ್ಲೂಕು ವಕೀಲರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪದಗ್ರಹಣ ಸಮಾರಂಭದಲ್ಲಿ ತಾಲ್ಲೂಕು ವಕೀಲರ ಸಂಘಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ತಾಲ್ಲೂಕು ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಎಂ.ಆರ್.ರಂಗಸ್ವಾಮಿ, ಉಪಾಧ್ಯಕ್ಷರಾಗಿ ಕಲಾವತಿರವರು ಇವರುಗಳು ಆಯ್ಕೆಯಾಗಿದ್ದಾರೆ.
ತಾಲ್ಲೂಕು ವಕೀಲರ ಸಂಘದ ಕಾರ್ಯದರ್ಶಿಯಾಗಿ ಹೆಚ್.ಪಿ.ಪ್ರಕಾಶ್, ಜಂಟಿ ಕಾರ್ಯದರ್ಶಿಯಾಗಿ ಹೆಚ್.ವಿ.ಅಜಯ್, ಖಜಾಂಚಿಯಾಗಿ ಹೆಚ್.ಲಕ್ಷ್ಮೀ ಇವರುಗಳನ್ನು ಸಂಘದ ವತಿಯಿಂದ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

