
ಹಿರಿಯೂರು:
ನಗರದ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಬಾಲಕಿಯರ ವಿದ್ಯಾರ್ಥಿ ನಿಲಯ ಆವರಣದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ ವಕೀಲರ ಸಂಘ ಅಭಿಯೋಜನೆ ಇಲಾಖೆ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳೆ ದಿನಾಚರಣೆ ಅಂಗವಾಗಿ ಕಾನೂನು ಅರಿವು –ನೆರವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮವನ್ನು ಸಹಾಯಕ ಕಾನೂನು ನೆರವು ಅಭಿಕ್ಷಕರು ಶ್ರೀಮತಿ ಸೋಮು ಕೆ.ಆರ್. ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಸಮಾಜಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ಜಿ.ದಿನೇಶ್ ವಕೀಲರ ಸಂಘದ ಜಂಟಿ ಕಾರ್ಯದರ್ಶಿ ಹೆಚ್.ವಿ. ಅಜಯ್ , ವಕೀಲರ ಸಂಘದ ಖಜಾಂಚಿ ಶ್ರೀಮತಿ ಹೆಚ್.ಲಕ್ಷ್ಮಿ ,ವಕೀಲರು ಮತ್ತು ಕಾನೂನು ಸಲಹೆಗಾರರು , ಶ್ರೀಮತಿ ಅನುಪೂರ್ಣ, ಪಿ.ಆರ್.ವಕೀಲರು ಹಾಗೂ ಸಂಪನ್ಮೂಲ ವ್ಯಕ್ತಿಗಳು ಎಂ.ಮೀನಾಕ್ಷಿ ಉಪನ್ಯಾಸ ನೀಡಿದರು.ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
