
ಹಿರಿಯೂರು :
ನಗರಸಭೆಯ ಹಿರಿಯ ಆರೋಗ್ಯ ನಿರೀಕ್ಷಕರಾಗಿ ಪದೋನ್ನತಿ ಹೊಂದಿದ ಶ್ರೀಯುತ ಅಶೋಕ್ ರವರಿಗೆ ನಗರಸಭೆ ಪೌರಾಯುಕ್ತರಾದ ಎ.ವಾಸೀಂರವರು ಹಿರಿಯ ಆರೋಗ್ಯ ನಿರೀಕ್ಷಕರಾಗಿ ಬಡ್ತಿ ಹೊಂದಿದ ಆದೇಶಪತ್ರವನ್ನು ನೀಡಿ, ಅಭಿನಂದಿಸಿದರು.
ಈ ಸಂದರ್ಭದಲ್ಲಿ ನಗರಸಭೆ ವ್ಯವಸ್ಥಾಪಕರಾದ ಶ್ರೀಮತಿ ಮಂಜುಳಾ, ಆರೋಗ್ಯ ನಿರೀಕ್ಷರಾದ ಸುನೀಲ್, ಲೆಕ್ಕಾಧಿಕಾರಿ ಜನಾರ್ಧನ್ ಸೇರಿದಂತೆ ನಗರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದು, ಹಿರಿಯ ಆರೋಗ್ಯ ನಿರೀಕ್ಷಕರಾಗಿ ಬಡ್ತಿ ಹೊಂದಿದ ಶ್ರೀಯುತ ಅಶೋಕ್ ರವರಿಗೆ ಶುಭಹಾರೈಸಿದರು.
