
ಹಿರಿಯೂರು :
ಗೂಳ್ಯ ಗ್ರಾಮ ಹಾಗೂ ಸುತ್ತಮುತ್ತಲಿನ ರೈತರಿಗೆ ಈ ಚೆಕ್ ಡ್ಯಾಂ ನಿರ್ಮಾಣದಿಂದ ನೀರಿನ ಸಂಗ್ರಹಣೆಗೆ ಸಹಕಾರಿಯಾಗುವುದರ ಜೊತೆಗೆ ಭೂಗರ್ಭ ಜಲಮಟ್ಟ ಹೆಚ್ಚಲು ಸಹಕಾರಿ ಆಗಲಿದ್ದು, ಗ್ರಾಮೀಣ ಭಾಗದ ಅಭಿವೃದ್ಧಿಗೆ ಇಂತಹ ನೀರಾವರಿ ಕಾಮಗಾರಿಗಳು ಬಹುಮುಖ್ಯವಾಗಿವೆ, ರೈತರ ಬದುಕಿಗೆ ಇವು ಇನ್ನಷ್ಟು ಬಲ ನೀಡಲಿವೆ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹೇಳಿದರು.
ತಾಲೂಕಿನ ಗೂಳ್ಯ ಗ್ರಾಮದಲ್ಲಿ ಚೆಕ್ ಡ್ಯಾಂ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ, ನಂತರ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಕಂದಿಕೆರೆಸುರೇಶ್ ಬಾಬು, ಕಾಂಗ್ರೆಸ್ ಅಧ್ಯಕ್ಷರು, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
