
ಹಿರಿಯೂರು :
ನಗರದ ವಾಗ್ದೇವಿ ವಿದ್ಯಾಸಂಸ್ಥೆಯ ಆವರಣದಲ್ಲಿ ಎಪ್ರಿಲ್ 1 ರ ಬುಧವಾರದಂದು ವಾಗ್ದೇವಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ದೈಹಿಕ ಶಿಕ್ಷಕರಾದ ಶಿವಶಂಕರ್ ಮಠದ್ ರವರ ವಯೋನಿವೃತ್ತಿ ಹಾಗೂ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂಬುದಾಗಿ ವಾಗ್ದೇವಿ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಕೆ.ವಿ.ಅಮರೇಶ್ ತಿಳಿಸಿದ್ದಾರೆ.
ದೈಹಿಕ ಶಿಕ್ಷಕರಾದ ಶಿವಶಂಕರ್ ಮಠದ್ ರವರನ್ನು ಬೀಳ್ಕೊಡುವ ಈ ಸಮಾರಂಭಕ್ಕೆ ಎಲ್ಲರೂ ತಪ್ಪದೇ ಬಂದು ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂಬುದಾಗಿ ವಾಗ್ದೇವಿ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಕೆ.ವಿ.ಅಮರೇಶ್ ಮನವಿ ಮಾಡಿದ್ದಾರೆ.
