
ಹಿರಿಯೂರು :
ತಾಲೂಕಿನ ಶ್ರೀಕುನಕಲಗುಂಡಿ ಪುಣ್ಯಕ್ಷೇತ್ರ, ಕೂನಿಕೆರೆ ಆಂಜನೇಯಸ್ವಾಮಿ, ಕಾಟಮಲಿಂಗೇಶ್ವರಸ್ವಾಮಿ, ಭೂತರಾಯಸ್ವಾಮಿ ಮತ್ತು ಲಕ್ಷ್ಮೀ ದೇವರುಗಳ ರಥೋತ್ಸವ ಏಪ್ರಿಲ್ 10ರಂದು ನಡೆಯಲಿದೆ ಎಂಬುದಾಗಿ ದೇವಸ್ಥಾನ ಸಮಿತಿಯವರು ತಿಳಿಸಿದ್ದಾರೆ.
ಈ ರಥೋತ್ಸವದ ಅಂಗವಾಗಿ ದೇವರಿಗೆ ವಿಶೇಷಪೂಜಾ ಕಾರ್ಯಕ್ರಮಗಳು, ಅರ್ಚನೆ, ಅಭಿಷೇಕ, ಮಹಾಮಂಗಳಾರತಿ, ನಂತರ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ಸಹ ಏರ್ಪಡಿಸಲಾಗಿದೆ. ಭಕ್ತಾದಿಗಳು ದೇವಾಲಯದಲ್ಲಿ ನಡೆಯುವ ಜಾತ್ರೆಯ ಎಲ್ಲಾ ಪೂಜಾಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ದೇವರ ಕೃಪೆಗೆ ಪಾತ್ರರಾಗುವಂತೆ ಮನವಿ ಮಾಡಿದ್ದಾರೆ.
