
ಹಿರಿಯೂರು:
ತಾಲ್ಲೂಕಿನ ಮಲ್ಲಪ್ಪನಹಳ್ಳಿ ಗ್ರಾಮದ ಕೃಷಿಕ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಎಸ್.ಸಿದ್ದಲಿಂಗಯ್ಯರವರು(83) ವಯೋಸಹಜ ಅನಾರೋಗ್ಯದಿಂದ ಗುರುವಾರ ಮುಂಜಾನೆ ನಿಧನರಾಗಿದ್ದಾರೆ ಎಂಬುದಾಗಿ ಕುಟುಂಬದ ಮೂಲಗಳು ತಿಳಿಸಿವೆ.
ಮೃತರು ಪತ್ನಿ, ಮೂವರು ಪುತ್ರಿಯರು ಹಾಗೂ ಪುತ್ರನನ್ನು ಅಗಲಿದ್ದಾರೆ. ಇವರ ಅಂತ್ಯಕ್ರಿಯೆ ಗುರುವಾರ ಮಧ್ಯಾಹ್ನ ಮೂರು ಗಂಟೆಗೆ ಮಲ್ಲಪ್ಪನಹಳ್ಳಿಯಲ್ಲಿ ನಡೆಸಲಾಯಿತು ಎಂಬುದಾಗಿ ಪುತ್ರ ಪ್ರಭಾಕರ್ ತಿಳಿಸಿದ್ದಾರೆ.
