
ಹಿರಿಯೂರು :
ನಗರದ ನೆಹರೂ ಮೈದಾನದ ಎ.ಕೃಷ್ಣಪ್ಪ ರೋಟರಿ ಸಭಾಭವನದಲ್ಲಿ ಯುವಕಾಂಗ್ರೆಸ್ ವತಿಯಿಂದ ಆಯೋಜಿಸಲಾಗಿದ್ದ“ಛಾತ್ರೋಂ ಕೀ ಗೂಂಜ್” ಕಾರ್ಯಕ್ರಮವನ್ನು ಎಐಸಿಸಿ ಕಾರ್ಯದರ್ಶಿಗಳಾದ ಸಂದೀಪ್, ಮಾಜಿಶಾಸಕರಾದ ಶ್ರೀಮತಿಕೆ.ಪೂರ್ಣಿಮಾಶ್ರೀನಿವಾಸ್ ಅವರು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜಿ.ಎಸ್.ಮಂಜುನಾಥ್, ಎಐಸಿಸಿ ಕಾರ್ಯದರ್ಶಿಗಳಾದ ಸಂದೀಪ್, ಜಯಂದರ್ ಸಿಂಗ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತಾಜ್ ಪೀರ್, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಶಿವಣ್ಣ ರವರು ಈ ಸಂದರ್ಭದಲ್ಲಿ ಮಾತನಾಡಿದವರು.
ನಮ್ಮ ದೇಶದ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟರು 12 ವರ್ಷದಲ್ಲಿ ಬಿಜೆಪಿ ಕೇಂದ್ರ ಸರ್ಕಾರದ ಆಡಳಿತದಲ್ಲಿ 7.5 ಕೋಟಿ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ 152 ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿದರು.

ಈ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀ ಸಂಪತ್ ಕುಮಾರ್, ಕೆಪಿಸಿಸಿ ಸದಸ್ಯರಾದ ಶ್ರೀ ಅಮೃತೇಶ್, ಕಂದಿಕೆರೆಸುರೇಶ್ ಬಾಬು, ಜಿಲ್ಲಾ ಯುವಕಾಂಗ್ರೆಸ್ ಅಧ್ಯಕ್ಷರಾದ ಕಾರೇಹಳ್ಳಿ ಉಲ್ಲಾಸ್, ಎನ್.ಎಸ್.ಯುಐ ಜಿಲ್ಲಾಧ್ಯಕ್ಷ ಕಿರಣ್ ಯಾದವ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿರಮೇಶ್, ಈರಲಿಂಗೇಗೌಡ, ನಗರಸಭೆ ಮಾಜಿ ಸದಸ್ಯ ಸಣ್ಣಪ್ಪ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕಂದಿಕೆರೆ ಅವಿನಾಶ್, ಗುರುಪ್ರಸಾದ್, ಶಾಹಿದ್ , ಸಿದ್ದೇಶ್, ಯುವ ಕಾಂಗ್ರೆಸ್ ಅಧ್ಯಕ್ಷ ಅಭಿಲಾಶ್ ಪಟೇಲ್,ನಗರಾಧ್ಯಕ್ಷ ದರ್ಶನ್ ವಿ,ಗ್ರಾಮಾಂತರ ಅಧ್ಯಕ್ಷ ಶಿವಕುಮಾರ್ ಈ,ಎನ್ ಎಸ್ ಯು ಐ ಅಧ್ಯಕ್ಷ ಶ್ರೀಕರುಣ್ ಕುಮಾರ್,ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಪೃಥ್ವಿ ಕೂಗಾರ್, ವಿನಯ್, ನರಸಿಂಹಮೂರ್ತಿ, ಹಾಗೂ ಡಿ.ಕೆ.ರಘು, ವಿದ್ಯಾರ್ಥಿ ಮಿತ್ರರು ಶಿಕ್ಷಕ ವೃಂದದವರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
