
ಹಿರಿಯೂರು :
ನಗರದ ಮಧ್ಯಭಾಗದಲ್ಲಿರುವ ನೇಕ್ ಬೀಬಿ ದರ್ಗಾ ಕ್ಕೆ ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹ್ಮದ್ ಜೀ ರವರು ಭೇಟಿನೀಡಿ, ರಾಜ್ಯದಲ್ಲಿ ಉತ್ತಮ ಮಳೆ-ಬೆಳೆಯಾಗಿ ರಾಜ್ಯದ ಜನತೆ ಶಾಂತಿ ಸೌಹಾರ್ದತೆಯಿಂದ ಜೀವನ ನಡೆಸುವಂತೆ ಪ್ರಾರ್ಥಿಸಿ, ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಾಮಿಯಾ ಮಸೀದಿ ಗುರುಗಳು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ನಗರಸಭೆ ಸದಸ್ಯರು ಅಜೀಮ್ ಪಾಷ, ಕೆಪಿಸಿಸಿ ಕೋ ಆರ್ಡಿನೇಟರ್ ಖಾಲಿದ್ ಹುಸೇನ್, ಗ್ರಾಮ ಪಂಚಾಯಿತಿ ಅಧ್ಯಕ್ಷರು ಅಲ್ತಾಫ್, ಮಹಮ್ಮದ್ ಸಾದ್ ದರ್ಗಾದ ಮಾಜಿ ಅಧ್ಯಕ್ಷರು ಜಬಿವುಲ್ಲ, ಖಾಯುಂ ಬೇಗ್,ಮೊಹಮ್ಮದ್ ಶುಕ್ರು, ಹಾಗೂ ಅಲ್ಪಸಂಖ್ಯಾತ ಮುಖಂಡರು ಪಕ್ಷದ ಕಾರ್ಯಕರ್ತರು ಪ್ರಾರ್ಥನೆಯಲ್ಲಿ ಭಾಗಿಯಾಗಿದ್ದರು.
