
ಹಿರಿಯೂರು :
ನಗರದಲ್ಲಿ ಭಾನುವಾರದಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ನೇತೃತ್ವದಲ್ಲಿ ಅಖಂಡ ಭಾರತ ಸಂಕಲ್ಪ ದಿವಸ್ ಪ್ರಯುಕ್ತ ಪಂಜಿನ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲಾ ಬಜರಂಗದಳ ಸಂಯೋಜಕರಾದ ರಾಘವನ್ ವಡಿಯಲು ದಿಕ್ಸೂಚಿ ಭಾಷಣ ನೆರವೇರಿಸಿದರು.
ಈ ಸಂದರ್ಭದಲ್ಲಿ ತಾಲೂಕು ಮಂಡಲದ ಬಿಜೆಪಿ ಅಧ್ಯಕ್ಷ ಅಭಿನಂದನ್, ಜಿಲ್ಲಾ ಸಹ ಕಾರ್ಯದರ್ಶಿ ವೆಂಕಟೇಶ, ಜಿಲ್ಲಾ ಸುರಕ್ಷಾ ಪ್ರಮುಖ್ ಚೇತನ್ ಜಿ, ತಾಲೂಕು ಅಧ್ಯಕ್ಷ ಪ್ರಶಾಂತ್ ಜಿ, ತಾಲೂಕು ಉಪಾಧ್ಯಕ್ಷ ಗೋವಿಂದಾಚಾರ್, ಕಾರ್ಯದರ್ಶಿ ರಾಘವೇಂದ್ರ, ಸಂಯೋಜಕ ಧನು, ಸಹ ಸಂಯೋಜಕ ಆಮ್ನಟ್ಟಿ ವಾಸು ಮತ್ತು ವಿಶ್ವ ಹಿಂದೂ ಪರಿಷತ್ ಬಜರಂಗದ ಎಲ್ಲಾ ಕಾರ್ಯಕರ್ತರು ಪಂಜಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
