
ಹಿರಿಯೂರು:
ತಾಲ್ಲೂಕಿನಲ್ಲಿ ಕೃಷಿಕರು ಹಾಗೂ ಕೃಷಿ ಅಭಿವೃದ್ಧಿಗಾಗಿ ಬಬ್ಬೂರುಫಾರಂನಲ್ಲಿ ವಿವಿಧ ಕೃಷಿ ತರಬೇತಿಗಳನ್ನು ಹಮ್ಮಿಕೊಳ್ಳುತ್ತಿದ್ದು, ಕೃಷಿಕರು ಈ ತರಬೇತಿಗಳಲ್ಲಿ ಭಾಗವಹಿಸುವ ಮೂಲಕ ತರಬೇತಿ ಪಡೆದು, ಉತ್ತಮ ಕೃಷಿಕರಾಗಿ ಅಭಿವೃದ್ಧಿ ಹೊಂದಬೇಕು ಎಂಬುದಾಗಿ ಚಿತ್ರದುರ್ಗ ಸಂಸದರಾದ ಗೋವಿಂದ.ಎಂ.ಕಾರಜೋಳ ಹೇಳಿದರು.
ತಾಲ್ಲೂಕಿನ ಬಬ್ಬೂರುಫಾರಂನಲ್ಲಿರುವ ಕೃಷಿ ವಿಶ್ವವಿದ್ಯಾಲಯಧ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆಗೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿ, ನಂತರ ಅವರು ಮಾತನಾಡಿದರು.

ಈ ಕಾರ್ಯಕ್ರದಲ್ಲಿ ಜೆ.ಡಿ.ಎಸ್. ಜಿಲ್ಲಾಧ್ಯಕ್ಷರಾದ ಎಂ.ಜಯಣ್ಣ, ಜೆ.ಡಿ.ಎಸ್. ಮುಖಂಡರಾದ ಎಂ.ರವೀಂದ್ರಪ್ಪ, ಬಿ.ಜೆ.ಪಿ. ಮುಖಂಡರಾದ ಎನ್.ಆರ್.ಲಕ್ಷ್ಮಿಕಾಂತ್, ಜೆ.ಡಿ.ಎಸ್. ತಾಲ್ಲೂಕು ಅಧ್ಯಕ್ಷರಾದ ಹನುಮಂತರಾಯಪ್ಪ, ಬಿ.ಜೆ.ಪಿ. ತಾಲ್ಲೂಕು ಅಧ್ಯಕ್ಷರಾದ ಅಭಿನಂದನ್, ಮಾಜಿ ತಾಲ್ಲೂಕು ಅಧ್ಯಕ್ಷರಾದ ವಿಶ್ವನಾಥ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


