
ಹಿರಿಯೂರು:
ಕೆ.ಎಸ್.ಆರ್.ಟಿ.ಸಿ. ನಿಲ್ದಾಣದ ಆಟೋ ಚಾಲಕ ಮತ್ತು ಮಾಲೀಕರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಜಿ.ಕೆ.ಮಂಜುನಾಥ್ ಮತ್ತು ಮ್ಯಾಕ್ಲೂರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಎಸ್.ಡಿ.ಎಂ.ಸಿ.ಅಧ್ಯಕ್ಷರಾಗಿ ಆಯ್ಕೆಯಾದ ಕೆ.ರಂಗಸ್ವಾಮಿ ಇವರುಗಳನ್ನು ಹಿರಿಯೂರು ಮಂಡಲ ನಿಕಟಪೂರ್ವ ಅಧ್ಯಕ್ಷರಾದ ವಿಶ್ವನಾಥ್ ಹಾಗೂ ವಿಧಾನಸಭಾ ಆಕಾಂಕ್ಷಿ ಲಕ್ಷ್ಮಿಕಾಂತ್ ಅವರು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಹಿರಿಯೂರು ಮಂಡಲ ನಿಕಟಪೂರ್ವ ಅಧ್ಯಕ್ಷರಾದ ವಿಶ್ವನಾಥ್, ವಿಧಾನಸಭಾ ಆಕಾಂಕ್ಷಿ ಲಕ್ಷ್ಮಿಕಾಂತ್ ಜಿಲ್ಲಾ ರೈತ ಮೋರ್ಚ ಕಾರ್ಯದರ್ಶಿ ಗೋವಿಂದಪ್ಪ, ರಾಜಣ್ಣ, ಮಂಡಲ ಬಿ.ಜೆ.ಪಿ. ಪ್ರಧಾನ ಕಾರ್ಯದರ್ಶಿಗಳಾದ ನಿತೀನ್, ಯೋಗೇಶ್, ಮಹೇಶ್ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.
