
ಹಿರಿಯೂರು:
ಶ್ರೀ ಶುಭೋದಯ ಶೈಕ್ಷಣಿಕ ಸೇವಾ ಆಶ್ರಮದ ಹಿತೈಷಿಗಳು ಹಾಗೂ ದಾನಿಗಳಾದ ತಾಲ್ಲೂಕಿನ ಮಲ್ಲೇಣು ಗ್ರಾಮದ ನಾಗೇಶ್ ರವರ ಹುಟ್ಟುಹಬ್ಬದ ಪ್ರಯುಕ್ತ ಶ್ರೀ ಶುಭೋದಯ ಸೇವಾ ವೃದ್ದಾಶ್ರಮದ ಎಲ್ಲಾ ಹಿರಿಯರಿಗೆ ಅನ್ನ ಸಂತರ್ಪಣೆ ವ್ಯವಸ್ಥೆ ಮಾಡಿಸಿದ್ದಾರೆ ಎಂಬುದಾಗಿ ಶ್ರೀ ಶುಭೋದಯ ಸೇವಾ ವೃದ್ದಾಶ್ರಮದ ಮುಖ್ಯಸ್ಥರಾದ ತೇಜೋಮೂರ್ತಿ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಕುಟುಂಬ ಸಮೇತರಾಗಿ ಶ್ರೀ ಶುಭೋದಯ ಸೇವಾ ವೃದ್ದಾಶ್ರಮಕ್ಕೆ ಭೇಟಿ ನೀಡಿ, ಅನ್ನಸಂತರ್ಪಣೆಯನ್ನು ನೆರವೇರಿಸಿ, ಹಿರಿಯರ ಆಶೀರ್ವಾದ ಪಡೆದ ಶ್ರೀಯುತ ನಾಗೇಶ್ ರವರ ಸೇವಾಮನೋಭಾವ ನಿಜಕ್ಕೂ ಶ್ಲಾಘನೀಯ ಕಾರ್ಯವಾಗಿದ್ದು, ಆ ಭಗವಂತನು ನಾಗೇಶ್ ಹಾಗೂ ಅವರ ಕುಟುಂಬ ವರ್ಗದವರಿಗೆ ಆರೋಗ್ಯ-ಆಯಸ್ಸು ಕೊಟ್ಟು ಕಾಪಾಡಲಿ ಎಂಬುದಾಗಿ ಆಶ್ರಮದ ಹಿರಿಯರು ಶುಭಹಾರೈಸಿದ್ದಾರೆ.

