
ಹಿರಿಯೂರು
ನಗರದ ವಾಣಿವಿಲಾಸ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ಮುಂದಿನ 5 ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಆಲೂರು ಹನುಮಂತರಾಯಪ್ಪ, ಉಪಾಧ್ಯಕ್ಷರಾಗಿ ಪಿ.ಆರ್.ಸತೀಶಬಾಬು 6 ನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

2026 ರಿಂದ 2030 ನೇ ಸಾಲಿಗೆ ಸೊಸೈಟಿಗೆ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಗಾಗಿ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಅಧ್ಯಕ್ಷರ ಸ್ಥಾನಕ್ಕೆ ಆಲೂರು ಹನುಮಂತರಾಯಪ್ಪ, ಉಪಾಧ್ಯಕ್ಷರ ಸ್ಥಾನಕ್ಕೆ ಪಿ.ಆರ್.ಸತೀಶಬಾಬು ಈ ಇಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ ಕಾರಣ ಇವರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂಬುದಾಗಿ ಚುನಾವಣಾ ಅಧಿಕಾರಿಗಳಾದ ಶ್ರೀಯುತ ಕೆ.ಶಿವಮೂರ್ತಿ ಘೋಷಿಸಿದರು.

ಈ ಸಂದರ್ಭದಲ್ಲಿ ವಾಣಿವಿಲಾಸ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕರುಗಳಾದ ಟಿ.ಮಲ್ಲೇಶಪ್ಪ, ರಂಗನಾಥ್, ವಸಂತ್ ಕುಮಾರ್, ಹೆಚ್.ನಟರಾಜ್, ಸಿ.ಜಗನ್ನಾಥ್, ಜೆ.ರಂಜಿತ, ಡಿ.ಗಂಗಮ್ಮ, ಹೆಚ್.ಡೀಶಪ್ಪ, ಮೂರುಕಣ್ಣಪ್ಪ, ಹಾಗೂ ವ್ಯವಸ್ಥಾಪಕರಾದ ಹೆಚ್.ಹೇಮಲತಾ, ಲೇಖಪಾಲಕರಾದ ಶಿವರಾಜ್, ಕ್ಯಾಶಿಯರ್ ಪ್ರಭಾಕರ್ ಸೇರಿದಂತೆ ಇತರರು ಉಪಸ್ಥಿತರಿದ್ದರು. ಕೆ.ಶಿವಮೂರ್ತಿರವರು ಚುನಾವಣಾ ಅಧಿಕಾರಿಗಳಾಗಿ ಕಾರ್ಯನಿರ್ವಹಿಸಿದರು.

