
ಹಿರಿಯೂರು :
ರಾಜ್ಯದ ಜನರ ಕಲ್ಯಾಣ, ರಾಜ್ಯದಲ್ಲಿ ಉತ್ತಮ ಮಳೆ-ಬೆಳೆ, ರೈತರ ಅಭಿವೃದ್ಧಿ ಮತ್ತು ಯುವಕರ ಭವಿಷ್ಯ ಉಜ್ವಲವಾಗಬೇಕು ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಶ್ರೀರಾಘವೇಂದ್ರ ಸ್ವಾಮಿಗಳಲ್ಲಿ ಪ್ರಾರ್ಥನೆ ಸಲ್ಲಿಸಿದರು.

ನಗರದ ಶ್ರೀಗುರುರಾಘವೇಂದ್ರಸ್ವಾಮಿ ಮಠಕ್ಕೆ ಭೇಟಿ ನೀಡಿ, ಶ್ರೀ ಗುರುರಾಯರ ಕೃಪಾಶೀರ್ವಾದವನ್ನು ಪಡೆದು, ನಂತರ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

