
ಬೆಂಗಳೂರು :
ಮಾಜಿ ಸಚಿವರು ಹಾಗೂ ಹಿರಿಯರಾದ ಶ್ರೀ ಎಚ್. ಏಕಾಂತಯ್ಯ ಅವರ ಪುತ್ರರಾದ ಜಯಪ್ರಕಾಶ್ ರವರು ನಿಧನರಾದ ಹಿನ್ನೆಲೆಯಲ್ಲಿ ಇಂದು ಅವರ ತೋಟದ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರಲ್ಲದೆ, ಅಗಲಿದ ಜಯಪ್ರಕಾಶ್ ರವರ ನಿಧನಕ್ಕೆ ಶ್ರದ್ಧಾಂಜಲಿ ಅರ್ಪಿಸಿದರು.
ಈ ಸಂದರ್ಭದಲ್ಲಿ ಭಗವಂತರು ಜಯಪ್ರಕಾಶ್ ರವರ ಆತ್ಮಕ್ಕೆ ಶಾಂತಿ ನೀಡಲಿ, ಹಾಗೂ ಅವರ ನಿಧನದ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ಕರುಣಿಸಲಿ ಎಂಬುದಾಗಿ ಪ್ರಾರ್ಥಿಸಿದರು.
