
ಹಿರಿಯೂರು :
ತಾಲ್ಲೂಕು ತಹಶೀಲ್ದಾರರಾದ ಸಿದ್ದೇಶ್ ರವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಸರ್ಕಾರ ತಾಲ್ಲೂಕು ಆಡಳಿತ ತಾಲ್ಲೂಕು ಪಂಚಾಯತ್ ನಗರ ಸಭೆ ಮತ್ತು ವಿವಿಧ ದಲಿತ ಸಂಘಟನೆಗಳು ಹಾಗೂ ಸಮಾಜ ಕಲ್ಯಾಣ ಇಲಾಖೆ ಇಲಾಖೆ ಹಿರಿಯೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಹಸಿರು ಕ್ರಾಂತಿಯ ಹರಿಕಾರ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಂ ರವರ 119 ನೇ ಹಾಗೂ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ರವರ 135 ನೇ ಜನ್ಮ ದಿನಾಚರಣೆ ಪೂರ್ವಭಾವಿಸಭೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಸಹಾಯಕ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯಾದ ದಿನೇಶ್, ನಗರಸಭೆ ಪೌರಯುಕ್ತರಾದ ವಾಸೀಮ್, ಸಿಡಿಪಿಓ ರಾಘವೇಂದ್ರ,ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಅಂಬೇಡ್ಕರ್ ಸಂವಿಧಾನ ಸಂರಕ್ಷಣಾ ಸಮಿತಿಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕೆ.ರಾಮಚಂದ್ರ, ರಾಜ್ಯಪ್ರಧಾನಕಾರ್ಯದರ್ಶಿ ಆರ್.ರಾಘವೇಂದ್ರ, ವಾಣಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಧರಣೇಂದ್ರಯ್ಯ, ದಲಿತ ಮುಖಂಡರುಗಳಾದ ಎಂ.ಡಿ.ಸಣ್ಣಪ್ಪ. ಜಿ.ಎಲ್.ಮೂರ್ತಿ. ಕೃಷ್ಣಮೂರ್ತಿಸೂರಗೊಂಡನಹಳ್ಳಿ, ಆಲೂರು ಕಾಂತರಾಜ್, ಮರಡಿಹಳ್ಳಿ ತಿಪ್ಪೇಸ್ವಾಮಿ, ಕೇಶವ್ ಮೂರ್ತಿ, ಡ್ಯಾನ್ಸ್ ಮಹೇಶ್, ಕಣುಮೇಶ್, ಕೂನಿಕೆರೆ ಮಾರುತೇಶ್, ಅಂಬೇಡ್ಕರ್ ಸಂವಿಧಾನ ಸಂರಕ್ಷಣಾ ಸಮಿತಿಯ ಜಿಲ್ಲಾ ಉಪಾಧ್ಯಕ್ಷರುಗಳಾದ ಲಕ್ಷ್ಮಣ್ ರಾವ್. ಕೆಂಚಪ್ಪ (ಆಟೋ)ಹಿರಿಯೂರು ತಾ.ಅಧ್ಯಕ್ಷರಾದ ಓಂಕಾರ್ ಮೂರ್ತಿ (ದೊಡ್ಡಘಟ್ಟ). ದಲಿತ ಯುವ ಮುಖಂಡರುಗಳಾದ ಮಹೇಶ್, ತಿಮ್ಮಯ್ಯ,ಮಾರುತಿ, ರಘು. ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
