
ಬೆಂಗಳೂರು :
ಇಂದು ಹೆಸರಾಂತ ಪ್ರಖ್ಯಾತ ದೆಹಲಿಯ ಏಮ್ಸ್ ಆಸ್ಪತ್ರೆ ಯಿಂದ ಪ್ರಸಿದ್ದ ವೈದ್ಯರು ಭೇಟಿ ನೀಡಿ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ರವರ ಅರೋಗ್ಯ ತಪಾಸಣೆ ಮಾಡಿ ಆರೋಗ್ಯದಲ್ಲಿ ಗಣನೀಯ ಚೇತರಿಕೆ ಕಂಡು ಬಂದಿರುವುದನ್ನು ಗುರುತಿಸಿ ಜೀವಕ್ಕೆ ಯಾವುದೇ ಅಪಾಯ ಇಲ್ಲವೆಂದು ಸ್ಪಷ್ಟ ಸಂದೇಶ ನೀಡಿ ಗುಣಮುಖರಾಗುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಸುಧಾಕರ್ ರವರ ಪುತ್ರ ಸುಹಾಸ್, ಕಾಂಗ್ರೆಸ್ ಮುಖಂಡರುಗಳಾದ ಈರಲಿಂಗೇಗೌಡ, ಸೇರಿದಂತೆ ಅನೇಕ ಮುಖಂಡರುಗಳು ಉಪಸ್ಥಿತರಿದ್ದರು.
